खबर / पोस्ट / जानकारी / विज्ञापन
दिनांक : 📅 1095740 - 6 - मनोरंजन दिवस |
| 2026-01-17 |
👁️ 7873 |
ಲೋಕ ನಾಯಕ ಡಾ. ಭೀಮಣ್ಣ ಖಂಡ್ರೆ ನಿಧನಕ್ಕೆ ಅಖಿಲ ಕರ್ನಾಟಕ ಬ್ರಾಹ್ಮಣ ಮಹಾ ಸಭಾ ಸಂತಾಪ
ಬೀದರ್ :
ಹಿರಿಯ ರಾಜಕಾರಣಿ, ಮಾಜಿ ಸಚಿವ ಹಾಗೂ ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾದ ಮಾಜಿ ಅಧ್ಯಕ್ಷರಾದ ಡಾ. ಭೀಮಣ್ಣ ಖಂಡ್ರೆ ಅವರು ನಿಧನರಾಗಿದ್ದು, ರಾಜ್ಯದ ರಾಜಕೀಯ ಹಾಗೂ ಸಾಮಾಜಿಕ ವಲಯಕ್ಕೆ ತೀವ್ರ ನಷ್ಟವಾಗಿದೆ ಎಂದು ಅಖಿಲ್ ಕರ್ನಾಟಕ ಬ್ರಾಹ್ಮಣ ಮಹಾ ಸಭಾ ರಾಜ್ಯ ಉಪಾಧ್ಯಕ್ಷರು ಹಾಗೂ ಜಿಲ್ಲಾ ಅಧ್ಯಕ್ಷರಾದ ವೆಂಕಟೇಶ್ ಕುಲಕರ್ಣಿ ಹುಮನಾಬಾದ . ರಾಜ್ಯ ಸಂಘಟನಾ ಕಾರ್ಯದರ್ಶಿ ಸತೀಶ್ ಕುಲಕರ್ಣಿ ಕೊಳಾರ, ಜಿಲ್ಲಾ ಸಂಚಾಲಕರಾದ ರಾಜೇಶ್ ಕುಲಕರ್ಣಿ ಹಳ್ಳಿಖೇಡ್. ಮಹಿಳಾ ಜಿಲ್ಲಾ ಸಂಚಾಲಕರಾದ ರೇಖಾ ಕುಲಕರ್ಣಿ. ರಾಜ್ಯ ಪ್ರತಿನಿಧಿ ಸುನಿಲ್ ಕುಲಕರ್ಣಿ ಅವರು ಶೋಕ ಸಂತಾಪ ವ್ಯಕ್ತಪಡಿಸಿದ್ದಾರೆ.
ಸ್ವಾತಂತ್ರ್ಯ ಹೋರಾಟ ಹಾಗೂ ಕರ್ನಾಟಕ ಏಕೀಕರಣ ಚಳವಳಿಯಲ್ಲಿ ಸಕ್ರಿಯವಾಗಿ ಪಾಲ್ಗೊಂಡಿದ್ದ ಡಾ. ಖಂಡ್ರೆ ಅವರು ಶಾಸಕರಾಗಿ, ಸಚಿವರಾಗಿ ತಮ್ಮ ಸುದೀರ್ಘ ಸಾರ್ವಜನಿಕ ಜೀವನದಲ್ಲಿ ಸಹಕಾರ ಮತ್ತು ಶಿಕ್ಷಣ ಕ್ಷೇತ್ರಗಳಲ್ಲಿ ಗಮನಾರ್ಹ ಸೇವೆ ಸಲ್ಲಿಸಿದ್ದರು. ಕಲ್ಯಾಣ ಕರ್ನಾಟಕದ ಭಾಗಗಳು ಕರ್ನಾಟಕದಲ್ಲೇ ಉಳಿಯಲು ಅವರು ಅವಿರತವಾಗಿ ಶ್ರಮಿಸಿದ್ದರು ಹಾಗೂ ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭೆಗೆ ತಮ್ಮದೆ ಆದ ಅಪಾರ ಕೊಡಗೆ ನೀಡಿದ್ದರು.
ಶರಣ ತತ್ವಗಳನ್ನು ಜೀವನದಲ್ಲಿ ಅಳವಡಿಸಿಕೊಂಡು ಸಮಾಜಸೇವೆಯಲ್ಲಿ ತೊಡಗಿದ್ದ ಅವರ ಅಗಲಿಕೆ ತುಂಬಲಾರದ ನಷ್ಟವಾಗಿದೆ. ಡಾ. ಖಂಡ್ರೆ ಅವರ ಆತ್ಮಕ್ಕೆ ಚಿರಶಾಂತಿ ದೊರಕಲಿ ಹಾಗೂ ಕುಟುಂಬ ವರ್ಗ ಮತ್ತು ಅಭಿಮಾನಿಗಳಿಗೆ ದುಃಖವನ್ನು ಭರಿಸುವ ಶಕ್ತಿj ದೇವರು ನೀಡಲಿ ಎಂದು ಅಖಿಲ್ ಕರ್ನಾಟಕ ಬ್ರಾಹ್ಮಣ ಮಹಾ ಸಭಾ ಜಿಲ್ಲಾ ಘಟಕದ ಪದಾಧಿಕಾರಿಗಳು. ಸರ್ವ ಸದಸ್ಯರು ಪ್ರಾರ್ಥಿಸಿದ್ದಾರೆ.
खबर कि अन्य लिंक :